ಕಾಂಗ್ರೆಸ್‌ನವ್ರಿಗೆ ರಾಷ್ಟ್ರೀಯವಾದಿಗಳ ಇತಿಹಾಸ ಹೇಳಿದ್ರೆ ಮೈಯೆಲ್ಲಾ ಉರಿಯುತ್ತೆ. ಭಗತ್ ಸಿಂಗ್, ರಾಜ್‌ಗುರು, ಸಾವರ್ಕರ್ ಇತಿಹಾಸ ಕೇಳೋದಿಲ್ಲ ಎಂದು ಯುವಬ್ರಿಗೆಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ  ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ನವ್ರಿಗೆ ರಾಷ್ಟ್ರೀಯವಾದಿಗಳ ಇತಿಹಾಸ ಹೇಳಿದ್ರೆ ಮೈಯೆಲ್ಲಾ ಉರಿಯುತ್ತೆ. ಭಗತ್ ಸಿಂಗ್, ರಾಜ್‌ಗುರು, ಸಾವರ್ಕರ್ ಇತಿಹಾಸ ಕೇಳೋದಿಲ್ಲ ಎಂದು ಯುವಬ್ರಿಗೆಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ  ವಾಗ್ದಾಳಿ ನಡೆಸಿದ್ದಾರೆ.

ರಾಷ್ಟ್ರೀಯವಾದಿಗಳ ಇತಿಹಾಸ ಹೇಳಿದ್ರೆ ಅವರಿಗೆ ಮೈಯೆಲ್ಲಾ ಉರಿಯುತ್ತೆ:

ಪಠ್ಯಪುಸ್ತಕ ಬದಲಾವಣೆ ಮಾಡ್ತಾರೆ ಅನ್ನೋದು ಮುಂಚೆಯೇ ಗೊತ್ತಿತ್ತು. ದೇಶದ ಇತಿಹಾಸ ಮುಚ್ಚಿಡೋದು ಅವರಿಗೆ ಅಭ್ಯಾಸ ಆಗಿದೆ. ಸಿಖ್ಖರ ಹತ್ಯಾಕಾಂಡ, ತುರ್ತು ಪರಿಸ್ಥಿತಿ ಸಮಯದಲ್ಲಿ ಏನಾಯ್ತು? ಅದೆಲ್ಲವನ್ನ ಮುಚ್ಚಿಟ್ಟಿದ್ದಾರೆ. ಇತಿಹಾಸವನ್ನ ಮುಚ್ಚಿಟ್ಟು ಅದರ ಮೇಲೆ ಕೂತಿದ್ದಾರೆ. ರಾಷ್ಟ್ರೀಯವಾದಿಗಳ ಇತಿಹಾಸ ಹೇಳಿದ್ರೆ ಅವರಿಗೆ ಮೈಯೆಲ್ಲಾ ಉರಿಯುತ್ತೆ. ರಾಷ್ಟ್ರೀಯತೆ ಕಂಡರೆ ಅವರಿಗೆ ಕೋಪ, ಎಲ್ಲರೂ ಒಂದುಗೂಡುವುದು ಅವರಿಗೆ ಇಷ್ಟವಿಲ್ಲ ಎಂದು ಕಿಡಿ ಕಾರಿದ್ದಾರೆ.

Leave a Reply

Your email address will not be published. Required fields are marked *