35 ಲಕ್ಷ ರು ಹಣ ಪಡೆದಿದ್ದಳು.

35 ಲಕ್ಷ ರು ಹಣ ಪಡೆದಿದ್ದಳು.

    ಕಂಬಾಳುಮಠದ ಸ್ವಾಮೀಜಿಗೆ ಯುವತಿಯಿಂದ 35 ಲಕ್ಷ ರೂಪಾಯಿ ವಂಚನೆ
ಬೆಂಗಳೂರು 08: ತಮ್ಮ ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿದ ವರ್ಷ ಎಂಬ ಹೆಸರಿನ ಮಹಿಳೆಯೊಬ್ಬರು ಹಂತಹಂತವಾಗಿ 35 ಲಕ್ಷ ರೂಪಾಯಿಗಳನ್ನು ತಮ್ಮ ಖಾತೆಗೆ ಹಾಕಿಸಿಕೊಂಡು, ವಂಚನೆ ಎಸಗಿದ್ದಾರೆ
ಎಂದು ಕಂಬಾಳು ಮಠದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಆರೋ ಪಿಸಿದ್ದಾರೆ.
ಫೇಸ್ಬುಕ್ ನಲ್ಲಿ ಪರಿಚಯವಾಗಿ ವಿಡಿಯೊ ಕರೆ ಮೂಲಕ ಸಲುಗೆಯಿಂದ ಮಾತನಾಡುತ್ತಿದ್ದಯುವತಿಯೊಬ್ಬರ ಬಲೆಗೆ ಬಿದ್ದುಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಸುಮಾರು 35 ಲಕ್ಷ ರು
ಕಳೆ ದುಕೊಂಡಿದ್ದಾರೆ, ಈ ಸಂಬಂಧ ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿಎಫ್ಐಆರ್ ದಾಖಲಾಗಿದೆ.
ತನ್ನ ಹೆಸರಿನಲ್ಲಿಹೆಚ್ಚು ಜಮೀ ನಿದ್ದು, ಅದನ್ನು ಮಠದ ಹೆಸರಿಗೆ ಬರೆಯುವುದಾಗಿ ಹೇಳಿದ್ದಯುವತಿ ಹಂತ ಹಂತವಾಗಿ 35 ಲಕ್ಷ ರು ಹಣ ಪಡೆದಿದ್ದಳು. ಜಮೀನು ದಾಖಲೆ ತರುವ ವೇಳೆ ತನ್ನ ಮೇಲೆ ಹಲ್ಲೆಯಾಗಿದ್ದು,
ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿರುವುದಾಗಿ ಯುವತಿ ಹೇಳಿದ್ದಳು.
ಆಸ್ಪತ್ರೆ ಬಿಲ್ ಪಾವತಿಸಲು ಸಹ ಹಣ ಕೇಳಿದ್ದಳು. ಆಕೆ ಮೇಲೆ ಅನುಮಾನ ಬಂದಿತ್ತು. ಪರಿಚಯಸ್ಥರೊಬ್ಬರನ್ನು ಆಸ್ಪತ್ರೆಗೆ ಕಳುಹಿಸಿ ವಿಚಾರಿಸಿದಾಗ, ವರ್ಷ ಎಂಬುವವರು ಯಾರೂ ದಾಖಲಾಗಿಲ್ಲವೆಂಬುದು
ಗೊ ತ್ತಾಗಿತ್ತು. ಆನಂತರ ವಷರ್ಾ ಕಡೆಯವರು ಎನ್ನಲಾದ ಮಂಜುಳಾ ಹಾಗೂ ಇತರರು ಮೇ 23ರಂದು ಮಠಕ್ಕೆ ಹೋ ಗಿ ಗಲಾಟೆ ಮಾಡಿದ್ದರು. 55 ಲಕ್ಷ ವಾಪಸು ಕೊಡುವಂತೆ ಸ್ವಾಮೀಜಿಯನ್ನು ಬೆದರಿಸಿದ್ದರು.
ಇದಾದ ನಂತರವೇ ಸ್ವಾಮೀಜಿ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ವಾಮೀಜಿ ಅವರನ್ನು 2020ರಲ್ಲಿಪರಿಚಯ ಮಾಡಿಕೊಂಡಿದ್ದಯುವತಿ, ನಾನಾ ಕಾರಣ ನೀಡಿ ಹಣ ಪಡೆದಿದ್ದಾಳೆ . ಹಣ ವಗರ್ಾವಣೆಗೆ ಸಂಬಂಧಪಟ್ಟ ಎಲ್ಲದಾಖಲೆಗಳು ಸ್ವಾಮೀಜಿ ಬಳಿ ಇವೆ. ಯಾವ ಖಾತೆಗೆ ಹಣ
ಜಮೆ ಆಗಿದೆ. ಬೇರೆ ಯಾರೆಲ್ಲಖಾತೆಗೆ ಹಣ ವಗರ್ಾವಣೆಯಾಗಿದೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ.
ಫೇಸ್ಬುಕ್ ನಲ್ಲಿ ವಷರ್ಾ ಹೆಸರಿನ ಯುವತಿ 2020ರಿಂದ ಫ್ರೆಂಡ್ ಆಗಿದ್ದಳು, ನಂತರ, ಯುವತಿ ಚಾಟಿಂಗ್ ಮಾಡಲಾರಂಭಿಸಿದ್ದಳು. ಆಧ್ಯಾತ್ಮಿಕವಾಗಿ ಆಸಕ್ತಿಇದೆ ಎಂದು ಹೇಳಿ, ಮೊಬೈಲ್ ನಂಬರ್  ಪಡೆದುಕೊಂಡಿದ್ದಳು. ತನ್ನ ಮೊಬೈಲ್ ನಂಬರ್ ಸಹ ಕೊಟ್ಟಿದ್ದಳು ಎಂದು ಸ್ವಾಮೀಜಿ ದೂರಿನಲ್ಲಿಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *