ಕರ್ನಾಟಕದ 6 ಜಿಲ್ಲೆಗಳಲ್ಲಿ ಜುಲೈ 4ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಜುಲೈ 4ರವರೆಗೆ ಭಾರಿ ಮಳೆ

ಮಳೆ

ಕರ್ನಾಟಕದ 6 ಜಿಲ್ಲೆಗಳಲ್ಲಿ ಜುಲೈ 4ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕುಂದಾಪುರದಲ್ಲಿ 7 ಸೆಂ.ಮೀ ಮಳೆಯಾಗಿದೆ, ಕ್ಯಾಸಲ್​ ರಾಕ್, ಶಿರಾಲಿ, ಗೋಕರ್ಣ, ಅಂಕೋಲಾ, ಕಾರವಾರ, ಕೊಲ್ಲೂರು, ಕದ್ರಾ, ಹೊನ್ನಾವರ, ಕುಮಟಾ, ಕೋಟ, ಸಿದ್ದಾಪುರ, ಗೇರುಸೊಪ್ಪ, ಮಂಕಿ, ಪಣಂಬೂರು, ಸುಬ್ರಹ್ಮಣ್ಯ, ಮಾನಿ, ಮುಲ್ಕಿ, ಮಂಗಳೂರು, ಉಡುಪಿ, ಕಾರ್ಕಳ, ಸಿದ್ದಾಪುರ,ಯಲ್ಲಾಪುರ, ಲೋಂಡಾ, ತಾಳಗುಪ್ಪ, ಲಿಂಗನಮಕ್ಕಿ, ಕೊಪ್ಪದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Leave a Reply

Your email address will not be published. Required fields are marked *