ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ವರುಣನ ಆರ್ಭಟ ಜೋರಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೊಷಿಸಲಾಗಿದೆ.
ಮಳೆ
ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ವರುಣನ ಆರ್ಭಟ ಜೋರಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೊಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಕೂಡ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.
ಮುಲ್ಕಿ,ಕಾರವಾರ, ಪಣಂಬೂರು, ಮಂಗಳೂರು, ಮಂಕಿ, ಬೇಲಿಕೇರಿಯಲ್ಲಿ ಭಾರಿ ಮಳೆಯಾಗಿದೆ. ಗೋಕರ್ಣ, ಕುಂದಾಪುರ, ಹೊನ್ನಾವರ, ಶಿರಾಲಿ, ಕುಮಟಾ, ಮಾಣಿ, ಪುತ್ತೂರು, ಉಡುಪಿ, ಕಾರ್ಕಳ, ಕೋಟ, ಬೆಳ್ತಂಗಡಿ,ಕೊಲ್ಲೂರು, ಅಂಕೋಲಾ, ಗೇರುಸೊಪ್ಪ, ಸುಬ್ರಹ್ಮಣ್ಯದಲ್ಲಿ ಮಳೆಯಾಗಿದೆ.
ಧರ್ಮಸ್ಥಳ, ನಾಪೋಕ್ಲು, ಕ್ಯಾಸಲ್ ರಾಕ್,ಸಿದ್ದಾಪುರ, ಭಾಗಮಂಡಲ, ಕೊಟ್ಟಿಗೆಹಾರ, ಕದ್ರಾ, ವಿರಾಜಪೇಟೆ, ಕೊಟ್ಟಿಗೆಹಾರ, ಲಿಂಗನಮಕ್ಕಿ, ಯಲ್ಲಾಪುರ, ಜಾನ್ಮನೆ, ಶೃಂಗೇರಿ, ಕಮ್ಮರಡಿ, ತಾಳಗುಪ್ಪ, ಪೊನ್ನಂಪೇಟೆ, ಗೋಣಿಕೊಪ್ಪಲ್, ಮಧುಗಿರಿ, ಕಮಲಾಪುರ, ಕೊಪ್ಪ. ಕಡೂರು, ಜಯಪುರ, ಮೂಡಿಗೆರೆ, ತುಮಕೂರು, ತ್ಯಾಗರ್ತಿ, ಹುಂಚದಕಟ್ಟೆ, ಹುಣಸೂರಿನಲ್ಲಿ ಮಳೆಯಾಗಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ವೇಗದಲ್ಲಿ ಬೀಸಸಲಿದೆ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಆಗಾಗ ಮಳೆಯಾಗಲಿದೆ.
ಎಚ್ಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.