Lokayukta raid In Karnataka: ಬೆಳ್ಳಂಬೆಳಗ್ಗೆಯೇ ಸಿಹಿ ನಿದ್ದೆಯಲ್ಲಿದ್ದ ಸರ್ಕಾರರ ಕೆಲ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ.

Lokayukta Raid: ಕರ್ನಾಟಕದಾದ್ಯಂತ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ. ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕದಾದ್ಯಂತ ಇಂದು (ಜೂನ್ 28) ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ (Lokayukta Raid). ಇದರೊಂದಿಗೆ ಬೆಳ್ಳಂಬೆಳಗ್ಗೆಯೇ ಸಿಹಿ ನಿದ್ದೆಯಲ್ಲಿದ್ದ ಕೆಲ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ(Lokayukta ) ಶಾಕ್ ನೀಡಿದೆ. ಭ್ರಷ್ಟಾಚಾರ ಆರೋಪಗಳು ಹಾಗೂ ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯ ಹಲವೆಡೆ ದಾಳಿ ಮಾಡಿದ್ದು, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಬೆಂಗಳೂರಿನ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರಿನ ಹಲವೆಡೆ ಲೋಕಾಯುಕ್ತ ದಾಳಿಯಾಗಿದೆ. ಕೆ.ಆರ್​​.ಪುರಂ ತಹಶೀಲ್ದಾರ್​ ಅಜಿತ್​​ ರೈ ಮನೆ ಸೇರಿದಂತೆ 10 ಕಡೆ ಲೋಕಾಯುಕ್ತ ದಾಳಿ ಮಾಡಿದ್ದು, ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಅಜಿತ್ ಮನೆಯಲ್ಲಿ ಲಕ್ಷಾಂತರ ರೂ. ನಗದು ಪತ್ತೆಯಾಗಿದೆ. ಅಜಿತ್ ಕೆಲ ದಿನಗಳ ಹಿಂದೆ ಕೆ.ಆರ್​.ಪುರಂನಿಂದ ವರ್ಗಾವಣೆಯಾಗಿದ್ದ . ಇವರ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Leave a Reply

Your email address will not be published. Required fields are marked *