ಹುಬ್ಬಳ್ಳಿ: ಅದು ನವಗ್ರಹ ತೀರ್ಥ ಕ್ಷೇತ್ರ ಎಂದೇ ಖ್ಯಾತಿ ಪಡೆದಿರುವ ಸುಕ್ಷೇತ್ರ. ಈ ಕ್ಷೇತ್ರದಲ್ಲಿ ಹನ್ನೆರಡು ವರ್ಷಗಳ ಬಳಿಕ ಈಗ ಮಹಾ ಮಸ್ತಕಾಭೀಷೇಕ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಲಾಗಿದೆ. 405 ಅಡಿ ಎತ್ತರದ ಸುಮೇರು ಪರ್ವತದ ಮೂಲಕ ರಾಷ್ಟ್ರ ಕಲ್ಯಾಣಕ್ಕೆ ಸಂಕಲ್ಪ ಮಾಡಲಾಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಸ್ತಿವಿ ನೋಡಿ..

ಹುಬ್ಬಳ್ಳಿಯ ಕೂಗಳತೆಯ ದೂರದಲ್ಲಿರುವ ವರೂರು ಗ್ರಾಮ ನವಗ್ರಹ ತೀರ್ಥ ಕ್ಷೇತ್ರ ಎಂದೇ ಖ್ಯಾತಿ ಪಡೆದಿದ್ದು, ವರೂರಿನ ಗ್ರಾಮದಲ್ಲಿ ಗುಣಧರನಂದಿ ಮಹಾರಾಜರ ನೇತೃತ್ವದಲ್ಲಿ ಜೈನ ತೀರ್ಥಂಕರರ ಸಮಾಗಮದಲ್ಲಿ 2025ರ ಜನವರಿ 15ರಿಂದ 26ರ ವರೆಗೆ ಮಹಾ ಮಸ್ತಕಾಭೀಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಹೌದು.. ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಮಹೋತ್ಸವ ಮುಹೂರ್ತ ಉದ್ಘೋಷ ಕಾರ್ಯಕ್ರಮದಲ್ಲಿ ಮಹಾ ಮಸ್ತಕಾಭೀಷೇಕದ ದಿನಾಂಕ ನಿಗದಿ ಮಾಡಲಾಗಿದ್ದು,‌ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಮಹಾ ಮಸ್ತಕಾಭೀಷೇಕದ ಅಧ್ಯಕ್ಷರನ್ನಾಗಿ ಕೂಡ ಘೋಷಣೆ ಮಾಡಲಾಯಿತು. ಅಲ್ಲದೇ ಇದೇ ವೇಳೆ ವೀರೇಂದ್ರ ಹೆಗ್ಗಡೆಯವರಿಗೆ ಜವಾಬ್ದಾರಿ ವಹಿಸುವ ಮೂಲಕ ಸನ್ಮಾನಿಸಿ ಗೌರವ ಸಮರ್ಪಣೆ ಮಾಡಲಾಯಿತು.

ಇನ್ನೂ ಹನ್ನೆರಡು ವರ್ಷಗಳ ಬಳಿಕ ನಡೆಯುವ ಮಹಾ ಮಸ್ತಕಾಭೀಷೇಕದ ವಿಶೇಷತೆ ಎಂದರೇ ಒಂದು ಯುಗ ಪೂರ್ಣಗೊಂಡ ಬೆನ್ನಲ್ಲೇ ಮಹಾ‌ ಮಸ್ತಕಾಭೀಷೇಕ ಅವಧಿ ನಿಗದಿ ಮಾಡಲಾಗುತ್ತದೆ. ಹುಬ್ಬಳ್ಳಿಯ ವರೂರಿನಲ್ಲಿ ನಡೆಯುವ ಮಸ್ತಕಾಭೀಷೇಕ 27 ಪದಾರ್ಥ, 18 ದಿಗಂಬರ ಆಚಾರ್ಯರು, ಶ್ವೇತಾಂಬರ, ದಿಗಂಬರ ಹಾಗೂ ಮೂರ್ತಿಪೂಜಕರು ಆಗಮಿಸುವ ಮೂಲಕ ಕಾರ್ಯಕ್ರಮ ಅದ್ದೂರಿಯಾಗಿ ನಡೆಸಲು ನಿರ್ಧಾರ ಮಾಡಲಾಗಿದೆ. ಒಂಬತ್ತು ದೇಶಗಳ ಮೂಲಕ ಒಂಬತ್ತು ತರಹದ ಹೂವುಗಳಿಂದ ಪುಷ್ಪ ವೃಷ್ಟಿ ಮಾಡಲಾಗುತ್ತದೆ. ಸರ್ವಧರ್ಮ ಸಮ್ಮೇಳನದ ಜೊತೆಗೆ ಜೈನ್ ಸಾಹಿತ್ಯ ಸಮ್ಮೇಳನ ಕೂಡ ನಡೆಸಲಾಗುತ್ತದೆ. 24 ಆನೆ‌, ಕುದುರೆ ಹಾಗೂ 108 ರಥದಿಂದ ಮಹಾ ಮೆರವಣಿಗೆ ಮಾಡಲಾಗುತ್ತದೆ ಎಂಬುವುದು ಮಹಾ ಮಸ್ತಕಾಭೀಷೇಕದ ವಿಶೇಷತೆ.

ಒಟ್ಟಿನಲ್ಲಿ ಭಗವಾನ್ ಪಾರ್ಶ್ವನಾಥ ತೀರ್ಥಂಕರ ಜೀವನದ ದರ್ಶನದ ಮೂಲಕ ಮಹಾ ಮಸ್ತಕಾಭೀಷೇಕದಿಂದ ಲೋಕ‌ಕಲ್ಯಾಣದ ಸಂಕಲ್ಪ ಮಾಡಲಾಗಿದ್ದು, ಬಹುದೊಡ್ಡ ಸಂಭ್ರಮಕ್ಕೆ ಮಹಾ ಮಸ್ತಕಾಭೀಷೇಕ ಸಾಕ್ಷಿಯಾಗಲಿದೆ.

ಸಂಗಮೇಶ ಸತ್ತಿಗೇರಿ ನ್ಯೂಸ್ ಒನ್ ಕರ್ನಾಟಕ ಹುಬ್ಬಳ್ಳಿ

Leave a Reply

Your email address will not be published. Required fields are marked *

Latest News