ಮಹಾರಾಷ್ಟ್ರ ಡಿವೈಡರ್​ಗೆ ರಾಜ್ಯದ ಬುಲ್ಧಾನದಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ನಡೆದಿದ್ದು, ಡಿವೈಡರ್​ಗೆ ಬಸ್​ ಡಿಕ್ಕಿಯಾಗಿ ಬೆಂಕಿ ತಗುಲಿ 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.

ಮಹಾರಾಷ್ಟ್ರ: ರಾಜ್ಯದ ಬುಲ್ಧಾನದಲ್ಲಿ ಶುಕ್ರವಾರ ತಡರಾತ್ರಿ ಭೀಕರ (Accident) ನಡೆದಿದೆ. ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್, ಬುಲ್ಧಾನ ಜಿಲ್ಲೆಯ ಸಿಂಧಖೇಡ್‌ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಡಿವೈಡರ್​ಗೆ ಡಿಕ್ಕಿಯಾಗಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡಿದ್ದು, 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರೆಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಹೋಗಿದ್ದು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ಅಪಘಾತದ ನಂತರ ಬಸ್ಸಿನಲ್ಲಿ ಕಾಣಿಸಿಕೊಂಡ ಬೆಂಕಿ

ಇನ್ನು ಬಸ್​ ಅಪಘಾತವಾದಾಗ ಎಲ್ಲಾ ಪ್ರಯಾಣಿಕರು ಮಲಗಿಕೊಂಡಿದ್ದು, ಎನಾಗುತ್ತಿದೆ ಎನ್ನುವಷ್ಟರಲ್ಲೇ ಬೆಂಕಿ ಹೊತ್ತಿಕೊಂಡಿದೆ. ಸುಮಾರು 25 ಪ್ರಯಾಣಿಕರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಈ ಬಗ್ಗೆ ಪೊಲೀಸ್-ಆಡಳಿತ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಸದ್ಯ ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ.

ಲಾರಿ, 2 ಆಟೋಗಳ ಅಪಘಾತ ಪ್ರಕರಣ; ಮೃತರ ಸಂಖ್ಯೆ 8ಕ್ಕೆ ಎರಿಕೆ

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿಯಲ್ಲಿ ಬಳಿ ಲಾರಿ, 2 ಆಟೋಗಳ ನಡುವೆ ಅಪಘಾತವಾಗಿದ್ದು, ಮೃತರ ಸಂಖ್ಯೆ 8 ಕ್ಕೆ ಎರಿಕೆಯಾಗಿದೆ. ಗಂಭೀರ ಗಾಯಗೊಂಡವರಿಗೆ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಸಾಹಿರಾ(25), ಯಾಸ್ಮಿನ್(45), ಶಾಮ್(40), ಉಮೇಶ್(27), ಜಹೀರಾ(16) ಸಪ್ರಾಭೀ(55), ಇಬ್ರಾಹಿಂ(33), ಕೌಸರ್(35) ಮೃತ ವ್ಯಕ್ತಿಗಳು. ಇನ್ನು ಮೃತಪಟ್ಟವರೆಲ್ಲರೂ ಬಳ್ಳಾರಿಯ ಕೌಲ್​ಬಜಾರ್​ ನಿವಾಸಿಗಳಾಗಿದ್ದು, ಹೊಸಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *