ಗಾಂಜಾ, ಮದ್ಯದ ಮತ್ತಿನಲ್ಲಿ ತಾಯಿಗೆ ಹಿಂಸೆ ನೀಡುತ್ತಿದ್ದ ತಂದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗ ಕೊಲೆ ಮಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

ಲಿಂಗಸುಗೂರು ತಾಲೂಕಿನ ದೇವರಭೂಪೂರು ಗ್ರಾಮದ ನಿವಾಸಿ ಬಂಡಿ ತಿಮ್ಮಣ್ಣ (55) ಕೊಲೆಯಾದ ವ್ಯಕ್ತಿ. ಮಗ ಶೀಲವಂತ ಕೊಲೆ ಆರೋಪದಲ್ಲಿ ಬಂಧಿತನಾಗಿದ್ಧಾನೆ.

ತಂದೆ ಪ್ರತಿ ನಿತ್ಯ ಗಾಂಜಾ, ಮದ್ಯ ಸೇವಿಸಿ ತಾಯಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಮಗ ತಂದೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿಬಳಿಕ ತಾನೇ ಪೊಲೀಸರಿಗೆ ಶರಣಾಗಿದ್ದಾನೆ.

ಕುಟುಂಬಸ್ಥರ ಎದುರೇ ತಂದೆಯನ್ನು ಕೊಂದು ತಪ್ಪಿಸಿಕೊಳ್ಳಲು ದಾರಿಯಿಲ್ಲದ ಕಾರಣ ಶೀಲವಂತ ತಾನೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಲಿಂಗಸುಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ತಾನಾಗೇ ಪೊಲೀಸರಿಗೆ ಶರಣಾಗಿದ್ದು, ಈ ಬಗ್ಗೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *