ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ರಾಯಚೂರು ಜಿಲ್ಲೆಯಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಸಂಸ್ಥೆಯನ್ನು ಸ್ಥಾಪಿಸಲು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವ ಮನ್ಸುಖ್ ಎಲ್. ಮಾಂಡವಿಯಾ ಅವರಿಗೆ ಪತ್ರ ಬರೆದಿದ್ದಾರೆ.

Siddaramaiah: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸಚಿವ ಮನ್ಸುಖ್ ಎಲ್. ಮಾಂಡವಿಯಾಗೆ ಪತ್ರ ಬರೆದ ಸಿದ್ಧರಾಮಯ್ಯ

ಸಾಂದರ್ಭಿಕ ಚಿತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ರಾಯಚೂರು ಜಿಲ್ಲೆಯಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಸಂಸ್ಥೆಯನ್ನು ಸ್ಥಾಪಿಸಲು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವ ಮನ್ಸುಖ್ ಎಲ್. ಮಾಂಡವಿಯಾ ಅವರಿಗೆ ಪತ್ರ ಬರೆದಿದ್ದಾರೆ. ಇದೀಗ ಈ ಬಗ್ಗೆ ಟ್ವಿಟರ್​​ನಲ್ಲಿ ಸಿದ್ಧರಾಮಯ್ಯ ಅವರು ಹಂಚಿಕೊಂಡಿದ್ದಾರೆ.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವ ಮನ್ಸುಖ್ ಎಲ್. ಮಾಂಡವಿಯಾ ಅವರೇ ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS)ನ್ನು ಸ್ಥಾಪಿಸಲು ಅನುಮತಿ ಮತ್ತು ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಮನವಿ ಮಾಡುತ್ತಿದ್ದೇನೆ ಎಂದು ಸಿದ್ಧರಾಮಯ್ಯ ಪತ್ರದಲ್ಲಿ ಬರೆದಿದ್ದಾರೆ.

ರಾಯಚೂರು ಮಹತ್ವಾಕಾಂಕ್ಷೆಯ ಜಿಲ್ಲೆ. ಇತರ ಪ್ರದೇಶಗಳಿಗೆ ಹೋಲಿಸಿದರೆ ಆರೋಗ್ಯ, ಶಿಕ್ಷಣ ಮತ್ತು ತಲಾ ಆದಾಯದ ಮಟ್ಟಗಳು ಇನ್ನೂ ಕೆಳಮಟ್ಟದಲ್ಲಿವೆ. ಈ ಪ್ರದೇಶವು ಭೌಗೋಳಿಕ ಅನಾನುಕೂಲತೆಯನ್ನು ಹೊಂದಿದೆ, ಏಕೆಂದರೆ ಇದು ಹವಾಮಾನ ವೈಪರೀತ್ಯಗಳು ಉಂಟಾಗುತ್ತದೆ. ಇಂತಹ ಸಮಸ್ಯೆಗಳನ್ನು ರಾಯಚೂರಿಗೆ ಅನುಭವಿಸುತ್ತಿದ್ದಾರ, ಈ ಕಾರಣಕ್ಕೆ ಜಿಲ್ಲೆಯಲ್ಲಿ ಸದೃಢವಾದ ವೈದ್ಯಕೀಯ ಸಂಸ್ಥೆಗಳ ಅಗತ್ಯ ಇದೆ. ಏಮ್ಸ್ ಸ್ಥಾಪನೆಯು ಈ ಪ್ರದೇಶದಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳನ್ನು ನೀಡಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಪ್ರಸ್ತಾವನೆ ಕಾರ್ಯರೂಪಕ್ಕೆ ಬರುವಂತೆ ಜನ ಹಾಗೂ ಜನಪ್ರತಿನಿಧಿಗಳಿಂದ ಬೇಡಿಕೆ ವ್ಯಕ್ತವಾಗುತ್ತಿದೆ. ಕಲ್ಯಾಣ ಕರ್ನಾಟಕ ನಮ್ಮ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ.ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೂ ಹಾಗೂ ನನ್ನ ಸಹೋದ್ಯೋಗಿ ಎನ್.ಎಸ್.ಬೋಸರಾಜು, ಸಹ ಈ ಕನಸನ್ನು ನನಸಾಗಿಸಲು ಒತ್ತಾಯಿಸಿ ನನಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ನೀವು ಪ್ರಮುಖ ನಿರ್ಧಾರವನ್ನು ಕೈಗೊಳ್ಳುತ್ತೀರಾ ಎಂಬ ನಂಬಿಕೆ ನನಗೆ ಇದೆ. ಈ ನಿಟ್ಟಿನಲ್ಲಿ ಸಂಬಂಧಿಸಿರುವ ಅಧಿಕಾರಿಗಳ ಗಮನಕ್ಕೆ ತರುವಂತೆ ಮತ್ತು ನಿಮ್ಮ ನಿರ್ದೇಶನದಂತೆ ಈ ಕಾರ್ಯ ನಡೆಯಬೇಕಿದೆ, ನಿಮ್ಮ ಉತ್ತರಕ್ಕೆ ನಾನು ಎದುರು ನೋಡುತ್ತಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ಪತ್ರದಲ್ಲಿ ಬರೆದಿದ್ದಾರೆ.

Leave a Reply

Your email address will not be published. Required fields are marked *